BengaluruPolitics

ಡಿ.ಕೆ.ಶಿವಕುಮಾರ್‌ ಸಿಎಂ ಆಗಲಿ; ಹಾಡಿಹೊಗಳಿದ ಬಿಜೆಪಿ ಶಾಸಕ ಅಶ್ವತ್ಥನಾರಾಯಣ

ಬೆಂಗಳೂರು; ಬಿಜೆಪಿ ಅಧಿಕಾರದಲ್ಲಿದ್ದಾಗ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಿನ ಸಚಿವ ಅಶ್ವತ್ಥನಾರಾಯಣ ಯಾರಪ್ಪ ಗಂಡ್ಸು ಎಂದು ಪ್ರಶ್ನೆ ಮಾಡುತ್ತಾ, ಡಿಕೆ ಸಹೋದರರ ವಿರುದ್ಧ ಮುಗಿಬಿದ್ದಿದ್ದರು. ಅದಲ್ಲದೆ ಹಲವು ಬಾರಿ ಡಿಕೆ ಸಹೋದರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಅವರು, ಡಿ.ಕೆ.ಶಿವಕುಮಾರ್‌ ಅವರನ್ನು ಹಾಡಿಹೊಗಳಿದ್ದಾರೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂದು ಶುಭ ಹಾರೈಸಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಶೇಷಾದ್ರಿಪುರಂನ ಶಿರೂರು ಪಾರ್ಕ್‌ನಲ್ಲಿ ಮಲ್ಲೇಶ್ವರಂ, ಚಾಮರಾಜಪೇಟೆ, ಗಾಂಧಿನಗರ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಅಶ್ವತ್ಥ್ ನಾರಾಯಣ, ದಿನೇಶ್‌ ಗುಂಡೂರಾವ್‌, ಜಮೀರ್‌ ಅಹ್ಮದ್‌ ಖಾನ್‌ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಅಶ್ವತ್ಥನಾರಾಯಣ, ಡಿ.ಕೆ.ಶಿವಕುಮಾರ್‌ ಇನ್ನೂ ಉನ್ನತ ಮಟ್ಟಕದ್ಕೆ ಏರಬೇಕು. ಅವರು ಸಿಎಂ ಕೂಡಾ ಆಗಬೇಕು ಎಂದು ಶುಭ ಹಾರೈಸಿದರು. ಈ ವೇಲೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಗುಳ್ನಕ್ಕರು. ಪಕ್ಕದಲ್ಲೇ ಇದ್ದ ಜಮೀರ್‌ ಅಹ್ಮದ್‌ ಖಾನ್‌ ಚಪ್ಪಾಳೆ ಹಡೊಎದು ಸ್ಮೈಲ್‌ ಕೊಟ್ಟರು.

 

Share Post