Bengaluru

ಕಾವೇರಿ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರಿಂದ ಪ್ರಧಾನಿಗೆ ಪತ್ರ

ಬೆಂಗಳೂರು; ರಾಜ್ಯದಲ್ಲಿ ಕಾವೇರಿ ಹೋರಾಟ ಜೋರಾಗಿದೆ. ಸುಪ್ರೀಂ ಕೋರ್ಟ್‌ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹೊರಡಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಧ್ಯೆಪ್ರವೇಶ ಮಾಡಿದರೆ ಮಾಡಿದರೆ ಮಾತ್ರ ಸಮಸ್ಯೆ ಪರಿಹಾರ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಸರಿಯಾಗಿ ಮಳೆಯಾಗಿಲ್ಲ. ಹೀಗಾಗಿ ನೀರಿನ ಕೊರೆತೆ ಇದೆ. ಕೃಷಿಗೆ ಅಷ್ಟೇ ಅಲ್ಲ, ಕುಡಿಯುವುದಕ್ಕೂ ನೀರಿನ ಅಭಾವವಿದೆ. ಇದನ್ನು ಮನಗಂಡು ಮಧ್ಯಪ್ರವೇಶ ಮಾಡಿ ನ್ಯಾಯ ಒದಗಿಸಬೇಕು ಎಂದು ಪ್ರಧಾನಿ ಮೋದಿಗೆ ದೇವೇಗೌಡರು ಮನವಿ ಮಾಡಿದ್ದಾರೆ.

 

Share Post