BengaluruPolitics

ಲೋಕಸಭಾ ಚುನಾವಣೆ ಹಿನ್ನೆಲೆ; ಫೆಬ್ರವರಿ 17ಕ್ಕೆ ಮಂಗಳೂರಲ್ಲಿ ಕಾಂಗ್ರೆಸ್‌ ಸಮಾವೇಶ

ಬೆಂಗಳೂರು; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳೂ ಸಿದ್ಧತೆ ನಡೆಸಿವೆ. ಇನ್ನು ಚುನಾವಣೆ ಹಿನ್ನೆಯಲ್ಲಿ ಮಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಕಾಂಗ್ರೆಸ್‌ ಮುಂದಾಗಿತ್ತು. ಅಂದುಕೊಂಡಂತೆ ಆಗಿದ್ದರೆ ಜನವರಿ 22ರಂದು ಮಂಗಳೂರಿನಲ್ಲಿ ಸಮಾವೇಶ ನಡೆಯಬೇಕಿತ್ತು. ಆದ್ರೆ ಅದು ಮುಂದೂಡಿಕೆಯಾಗಿತ್ತು. ಇದೀಗ ಸಮಯ ನಿಗದಿಯಾಗಿದೆ.

ಫೆಬ್ರವರಿ 17ಕ್ಕೆ ಮಂಗಳೂರಿನಲ್ಲಿ ಬೃಹತ್‌ ಕಾಂಗ್ರೆಸ್‌ ಸಮಾವೇಶ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ  ಖರ್ಗೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post