BengaluruCrime

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ; ತಲಾ 25 ಲಕ್ಷ ರೂ. ಪರಿಹಾರ

ಬೆಂಗಳೂರು; ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್‌ ಸವಾರರು ಬಲಿಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಕಸ ತುಂಬಿಕೊಂಡು ಬಂದಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.

ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದಾನೆ. ಆದ್ರೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಸದ ಲಾರಿಗಳು ಅತಿ ವೇಗವಾಗಿ ಓಡಿಸುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತದೇಹಗಳನ್ನು ಎತ್ತಲು ಬಿಡಿದೆ ಪ್ರತಿಭಟನೆ ನಡೆಸಿದ್ದಾರೆ. ಇದ್ರಿಂದಾಗಿ ಸ್ಥಳಕ್ಕೆ ಆಗಮಿಸಿದ್ದ ಬಿಬಿಎಂಪಿ ಎಂಜಿನಿಯರ್‌ ಪ್ರವೀಣ್‌, ಮೃತರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡೋದಾಗಿ ಭರವಸೆ ನೀಡಿದರು.

Share Post