BengaluruCrime

ರಸ್ತೆ ಗುಂಡಿಗೆ ಮಹಿಳೆ ಬಲಿ ಪ್ರಕರಣ; ಬಿಬಿಎಂಪಿಗೆ ನೋಟಿಸ್‌ ಜಾರಿ

ಬೆಂಗಳೂರು; ಇತ್ತೀಚೆಗೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್‌ ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಲ್ಲೇಶ್ವರಂ ಟ್ರಾಫಿಕ್‌ ಪೊಲೀಸರು ಬಿಬಿಎಂಪಿಗೆ ನೋಟಿಸ್‌ ನೀಡಿದ್ದಾರೆ.

10 ದಿನಗಳ ಹಿಂದೆ ಬೆಂಗಳೂರಿನ ಸುಜಾತ ಚಿತ್ರಮಂದಿರದ ಈ ಘಟನೆ ನಡೆದಿತ್ತು. ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್‌ ಕೆಳಗೆ ಬಿದ್ದಿತ್ತು. ಆಗ ಹಿಂಬದಿ ಸವಾರರಾಗಿದ್ದ ಮಹಿಳೆ ಮೇಲೆ ಬಸ್‌ ಹರಿದಿತ್ತು. ಮಹಿಳೆಯ ಕುಟುಂಬಸ್ಥರ ದೂರಿನ ಮೇರೆಗೆ ಮಲ್ಲೇಶ್ವರಂ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದರು. ಬಿಬಿಎಂಪಿ ಹಾಗೂ ಬಸ್‌ ಚಾಲಕನ ವಿರುದ್ಧ ಕೇಸ್‌ ದಾಖಲಿಸಲಾಗಿತ್ತು. ಇದೀಗ ಪೊಲೀಸರು ಬಿಬಿಎಂಪಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ಅಪಘಾತ ನಡೆದ ಸ್ಥಳದ ರಸ್ತೆ ಡಾಂಬರೀಕರಣ ಟೆಂಡರ್ ಯಾರಿಗೆ ಕೊಟ್ಟಿದ್ರಿ..?, ನಿರ್ವಹಣೆ ಹೊಣೆ ಹೊತ್ತುಕೊಂಡಿದ್ದ ಎಂಜಿನಿಯರ್ ಯಾರು..?, ಯಾವಾಗ ಡಾಂಬರೀಕರಣ ಮಾಡಲಾಗಿತ್ತು..? ಎಂಬುದರ ಬಗ್ಗೆ ಮಾಹಿತಿ ಕೇಳಲಾಗಿದೆ.

 

Share Post