BengaluruCrime

ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ; 20ಕ್ಕೂ ಹೆಚ್ಚು ಬಸ್‌ಗಳು ಭಸ್ಮ

ಬೆಂಗಳೂರು; ಗ್ಯಾರೇಜ್‌ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 20 ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ವೀರಭದ್ರನಗರದ ಎಸ್‌ವಿ ಕೋಚ್‌ ವರ್ಕ್ಸ್‌ ಗ್ಯಾರೇಜ್‌ನಲ್ಲಿ ಈ ಅನಾಹುತ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಬಸ್‌ಗಳನ್ನು ರಿಪೇರಿ ಮಾಡುವ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಎಲ್ಲಾ ಬಸ್‌ಗಳಿಗೂ ಬೆಂಕಿ ಹಬ್ಬಿದೆ.  ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಗ್ಯಾರೇಜ್‌ ಸೂಪರ್‌ವೈಸರ್‌ ಹೇಳಿಕೊಂಡಿದ್ದಾರೆ. ಆದ್ರೆ ತನಿಖೆಯಿಂದಷ್ಟೇ ಘಟನೆಗೆ ಕಾರಣ ತಿಳಿದುಬರಲಿದೆ.

ಅಂದಹಾಗೆ 2105ರಲ್ಲಿ ಇದೇ ಜಾಗದಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿತ್ತು. ಕಾವೇರಿ ಗಲಾಟೆ ಸಂದರ್ಭದಲ್ಲಿ ಯುವತಿಯೊಬ್ಬಳು ಬಸ್‌ಗಳಿಗೆ ಬೆಂಕಿ ಹಚ್ಚಿದ್ದಳು. ಈ ವೇಳೆ 25 ಬಸ್‌ಗಳು ಸುಟ್ಟು ಕರಕಲಾಗಿದ್ದವು. ತಮಿಳುನಾಡಿನವರಿಗೆ ಸೇರಿದ ಬಸ್‌ಗಳೆಂದು ಬೆಂಕಿ ಹಾಕಲಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಬಸ್‌ಗಳಿಗೆ ಬೆಂಕಿ ಬಿದ್ದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

 

Share Post