BengaluruPolitics

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ; ಚರ್ಚೆ ಹುಟ್ಟು ಹಾಕಿದ ಎಂಬಿ ಪಾಟೀಲ್ ಹೇಳಿಕೆ

ಬೆಂಗಳೂರು; ಸಿಎಂ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಾರಿ ಫೈಟ್ ನಡೆದಿತ್ತು. ಕೊನೆಗೆ ಹೈಕಮಾಂಡ್ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕೊಡ್ತು. ಸಂಧಾನದ ವೇಳೆ ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ಆಗಿದೆ. ಲೋಕಸಭೆ ಚುನಾವಣೆ ಬಳಿಕ ಡಿಕೆಶಿಗೆ ಸಿಎಂ ಸ್ಥಾನ ಕೊಡ್ತಾರೆ ಎಂಬ ಸುದ್ದಿ ಇತ್ತು. ಆದ್ರೆ ಮೈಸೂರಿನಲ್ಲಿ ಸಚಿವ ಎಂಬಿ ಪಾಟೀಲರು ನಿನ್ನೆ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಇಲ್ಲ.  ಈ ಬಗ್ಗೆ AICC ಮಟ್ಟದಲ್ಲಿ ಯಾವ ಚರ್ಚೆಯೂ ನಡೆದಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿ ಅಗಿರ್ತಾರೆ ಅಂತ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಜೊತೆಗೆ ಈ ಬಗ್ಗೆ ವೇಣುಗೋಪಾಲ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ ಅಂತಾನೂ ಎಂಬಿ ಪಾಟೀಲ್ ಹೇಳಿದ್ದಾರೆ.

Share Post