Bengaluru

ಗಣೇಶ ಚತುರ್ಥಿ ಹಿನ್ನೆಲೆ; ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು; ಬುಧವಾರ  ಗಣೇಶ ಚತುರ್ಥಿ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶುಪಾಲನೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, 2022ರ ಆಗಸ್ಟ್ 31ರ ಬುಧವಾರದಂದು ಗಣೇಶ ಚತುರ್ಥಿ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.

 

Share Post