Bengaluru

ಪೀಣ್ಯದಲ್ಲಿ ಕೆಟ್ಟು ನಿಂತ ಮೆಟ್ರೋ ರೈಲು; ಸಂಚಾರ ವ್ಯತ್ಯಯ

ಬೆಂಗಳೂರು; ಮೆಟ್ರೋ ರೈಲಿನಲ್ಲಿ ತಾಂತ್ರಿಕದೋಷ ಕಂಡುಬಂದಿದ್ದು, ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲೊಂದು ಕೆಟ್ಟು ನಿಂತಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.  ಸದ್ಯ ಯಶವಂತಪುರ–ಸಿಲ್ಕ್ ಇನ್‌ಸ್ಟಿಟ್ಯೂಟ್‌ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಯುತ್ತಿದೆ. ಮಧ್ಯಾಹ್ನದೊಳಗೆ ತಾಂತ್ರಿಕ ದೋಷ ಸರಿಪಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೀಗಾಗಿ ನಾಗಸಂದ್ರದಿಂದ ಪ್ರಯಾಣಿಸುವ ಪ್ರಯಾಣಿಕರು, ಯಶವಂತಪುರಕ್ಕೆ ಬಸ್‌ನಲ್ಲಿ ಬಂದು ಇಲ್ಲಿಂದ ಪ್ರಯಾಣ ಮಾಡಬೇಕಾಗಿದೆ.

 

Share Post