Bengaluru

ರಾಜ್ಯ ರಾಜಕೀಯದಲ್ಲಿ ಕುತೂಹಲ; ಡಿಕೆಶಿ ಭೇಟಿಯಾದ ಸಚಿವ ಆನಂದ್‌ ಸಿಂಗ್‌

ಬೆಂಗಳೂರು: ಕೆಲ ದಿನಗಳಿಂದ ಪಕ್ಷಾಂತರದ ಬಗ್ಗೆ ರಾಜಕೀಯ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡಾ ಬಿಜೆಪಿಯ ಹಲವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ಸಚಿವ ಆನಂದ್‌ ಸಿಂಗ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಆನಂದ್‌ ಸಿಂಗ್‌, ಸ್ವಲ್ಪ ಸಮಯ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅನಂತರ ಮಾತನಾಡಿರುವ ಸಚಿವ ಆನಂದ್‌ ಸಿಂಗ್‌, ಇದು ಸೌಜನ್ಯದ ಮಾತುಕತೆ ಅಷ್ಟೇ ಎಂದು ಹೇಳಿದ್ದಾರೆ. ಆದ್ರೆ, ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬೇರೆ ಪಕ್ಷದ ನಾಯಕರು, ಇನ್ನೊಂದು ಪಕ್ಷದ ನಾಯಕರ ಮನೆಗಳಿಗೆ ತೆರಳುವುದು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ. ಅದರಂತೆಯೇ  ಆನಂದ್‌ ಸಿಂಗ್‌ ಹಾಗೂ ಡಿ.ಕೆ.ಶಿವಕುಮಾರ್‌ ಭೇಟಿ ಕೂಡಾ ಹವಲು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ.

 

Share Post