Bengaluru

ಕಾಂಗ್ರೆಸ್‌ನಿಂದ ರಾಷ್ಟ್ರಧ್ವಜಕ್ಕೆ ಅಪಮಾನ; ಸಚಿವ ಆರ್‌.ಅಶೋಕ್‌ ಕಿಡಿ

ಬೆಂಗಳೂರು: ಇದುವರೆಗೆ ದೇಶದಲ್ಲಿ ಎಲ್ಲೂ ಕೂಡಾ ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಪ್ರದರ್ಶನ ಮಾಡಿರಲಿಲ್ಲ. ಅದನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ಆ ಮೂಲಕ 120 ವರ್ಷ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದೆ ಎಂದು ಸಚಿವ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜಕ್ಕೆ ನಮ್ಮ ದೇಶದಲ್ಲಿ ವಿಶೇಷ ಗೌರವ ಇದೆ. ಅದು ನಮ್ಮ ದೇಶದ ಹೆಮ್ಮೆಯ ಸಂಕೇತ. ರಾಷ್ಟ್ರಧ್ವಜವನ್ನು ಹೇಗೆ ಬಳಸಬೇಕು..?, ಯಾವಾಗ ಬಳಸಬೇಕು..? ಅದರ ವ್ಯಾಸ ಎಷ್ಟಿರಬೇಕು..? ಎಂಬುದಕ್ಕೆ ತನ್ನದೇ ಆದ ನಿಮಯಗಳಿವೆ. ಆದ್ರೆ ಕಾಂಗ್ರೆಸ್‌ ಪಕ್ಷ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ, ಕಲಾಪದಲ್ಲಿ ಪ್ರತಿಭಟನೆ ವೇಳೆ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದೆ. ಇದು ದೇಶಕ್ಕೆ ಮಾಡಿರುವ ಅವಮಾನ. ಹೀಗಾಗಿ, ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

 

 

Share Post