Bengaluru

ಪಠ್ಯದಲ್ಲಿ ಪರಿಷ್ಕರಣೆಯಲ್ಲಾದ ತಪ್ಪು ಸರಿಪಡಿಸುತ್ತಿದ್ದೇವೆ; ಆರ್‌.ಅಶೋಕ್‌

ಬೆಂಗಳೂರು; ಶಾಲಾ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಏಳೆಂಟು ತಪ್ಪುಗಳಾಗಿವೆ. ಅವುಗಳನ್ನು ಸರಿಪಡಿಸಿ ಮತ್ತೆ ಪಠ್ಯಕ್ಕೆ ಸೇರಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್‌.ಅಶೋಕ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿದ್ದಗಂಗಾ ಶ್ರೀ, ಅಂಬೇಡ್ಕರ್ ಸೇರಿದಂತೆ ಹಲವು ಪಾಠಗಳಲ್ಲಿನ ಲೋಪಗಳನ್ನು ಸರಿಪಡಿಸಿ ಅದನ್ನು ಪಠ್ಯಕ್ಕೆ ಸೇರ್ಪಡೆಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡರ ಪತ್ರ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಅಶೋಕ್​, ದೇವೇಗೌಡರು ಹಿರಿಯರು. ದೇವೇಗೌಡರ ಪತ್ರದ ವಿಚಾರವಾಗಿಯೇ ಸಿಎಂ ಬೊಮ್ಮಾಯಿ‌ ಅವರು ಸಭೆ ನಡೆಸಿದ್ದಾರೆ. ಅವರು ಬರೆದ ಪತ್ರಕ್ಕೆ ಸಿಎಂ ಉತ್ತರ ಕೊಡುತ್ತಾರೆ. ಅವರಿಗೆ ಸ್ಪಷ್ಟ ಉತ್ತರ ಒದಗಿಸಲಾಗುತ್ತದೆ ಎಂದು ಹೇಳಿದರು.

Share Post