BengaluruCrime

ಮತದಾರರ ಮಾಹಿತಿ ದುರುಪಯೋಗ; ಲೋಕೇಶ್‌ ವಿರುದ್ಧ ದೂರು

ಬೆಂಗಳೂರು; ಮತದಾರ ಮಾಹಿತಿ ಸಂಗ್ರಹಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆ ನೀಡಲಾಗಿದ್ದು, ಇದನ್ನು ದುರುಪಯೋಗ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ  ಚಿಲುಮೆ ಸಂಸ್ಥೆಯ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದೆ. ಲೋಕೇಶ್‌ ಎಂಬ ಸಿಬ್ಬಂದಿ ವಿರುದ್ಧ ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ಚಿಲುಮೆ ಸಂಸ್ಥೆ ವಿರುದ್ಧ ತನಿಖೆ ಮಾಡುವುದಾಗಿ ತಿಳಿಸಿದ್ದಾರೆ. ಮತದಾರರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೇವೆ. ಡೇಟಾ ಸಂಗ್ರಹಿಸಿ ಎಂದು ಹೇಳಿರಲಿಲ್ಲ. ಅವರು ಮಾಹಿತಿ ಸಂಗ್ರಹಿಸುತ್ತಿದ್ದರ ಬಗ್ಗೆ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ನಾವು ಅವರಿಗೆ ನೀಡಿದ್ದ ಅನುಮತಿಯನ್ನ ಕ್ಯಾನ್ಸಲ್ ಮಾಡಿದ್ದೇವೆ ಎಂದು ರಂಗಪ್ಪ ಹೇಳಿದ್ದಾರೆ.

 

Share Post