BengaluruPolitics

ಪತ್ರಕರ್ತರ ಮೇಲೆ ಹಲ್ಲೆಗೆ ಮುಂದಾದ ಶಾಸಕ ಭೈರತಿ ಸುರೇಶ್‌

ನವದೆಹಲಿ; ದೆಹಲಿಯಲ್ಲಿ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗ, ಮಾಧ್ಯಮ ಪ್ರತಿನಿಧಿಗಳ ಮೇಲೆ ಶಾಸಕ ಭೈರತಿ ಸುರೇಶ್‌ ಗುಂಡಾವರ್ತನೆ ಪ್ರದರ್ಶಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆಯೂ ನಡೆದಿದೆ.

ಖಾಸಗಿ ವಾಹಿನಿಯೊಂದಕ್ಕೆ ಸಿದ್ದರಾಮಯ್ಯ ಸಂದರ್ಶನ ನೀಡಿದ್ದರು. ಅದರಲ್ಲಿ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಲು ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಬಂದಿದ್ದರು. ಈ ವೇಳೆ ಶಾಸಕ ಭೈರತಿ ಸುರೇಶ್‌ ಕೂಡಾ ಇದ್ದರು. ಇದೇ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಅನುಚಿತವಾಗಿ ವರ್ತಿಸಿದ್ದಾರೆ. ವಾದ ಮಾಡಿದ್ದಲ್ಲದೆ, ಹಲ್ಲೆಗೂ ಮುಂದಾಗಿದ್ದಾರೆ. ಪರಿಸ್ಥಿತಿ ಕೈಮೀರಿದಾಗ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ, ಭೈರತಿ ಸುರೇಶ್‌ರನ್ನು ಸುಮ್ಮನಾಗಿಸಿದ್ದಾರೆ.

 

Share Post