BengaluruCrime

ಶಾಸಕ ಮಾಡಾಳ್‌ಗೆ ಬಂಧನ ಭೀತಿ; ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ

ಬೆಂಗಳೂರು; ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ನಲವತ್ತು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಇದಾಗಿ ಐದು ದಿನವಾದರೂ ಮಾಡಾಳ್‌ ವಿರೂಪಾಕ್ಷಪ್ಪ ಮತ್ತೆ ಇಲ್ಲ. ಪ್ರಕರಣದಲ್ಲಿ ಅವರೇ ಎ1 ಆರೋಪಿಯಾಗಿದ್ದಾರೂ, ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಈ ನಡುವೆ ಮಾಡಾಳ್‌ ಬಂಧನವಾಗುತ್ತೆ ಎಂದು ಹೇಳಲಾಗುತ್ತಿದೆ. ಆದ್ರೆ ಬಂಧನದ ಭೀತಿಯಲ್ಲಿರುವ ಮಾಡಾಳ್‌ ಅವರು, ಅಜ್ಞಾತ ಸ್ಥಳದಲ್ಲಿದ್ದು, ಬೇಲ್‌ಗಾಗಿ ಪ್ರಯತ್ನಿಸುತ್ತಿದ್ದಾರೆ. ಇಂದು ಅವರ ಪರ ವಕೀಲರೊಬ್ಬರು ಹೈಕೋರ್ಟ್‌ನಲ್ಲಿ ಮಾಡಾಳ್‌ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Share Post