BengaluruPolitics

ಅನುದಾನಕ್ಕಾಗಿ ಡಿಕೆಶಿ ಕಾಲಿಗೆ ನಮಸ್ಕರಿಸಿದ ಶಾಸಕ ಮುನಿರತ್ನ

ಬೆಂಗಳೂರು; ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಅಮೃತ ನಗರೋತ್ಥಾನ ಯೋಜನೆಯಡಿ ಆರ್‌ಆರ್‌ ನಗರ ಕ್ಷೇತ್ರಕ್ಕೆ 126 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಆದ್ರೆ ಅದನ್ನು ವಾಪಸ್‌ ಪಡೆದು ಬೇರೆ ಕ್ಷೇತ್ರಗಳಿಗೆ ನೀಡಲಾಗಿದೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಹೀಗಾಗಿ, ಅವರು ಅರಮನೆ ಮೈದಾನದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಡಿಕೆಶಿ ಕಾಲಿಗೆ ನಮಸ್ಕರಿಸಿ, ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿರುವ ಶಾಸಕ ಮುನಿರತ್ನ ಅವರು, ನಾನು ಮನವಿ ಸಲ್ಲಿಸಿದ್ದೇನೆ. ಡಿ.ಕೆ.ಶಿವಕುಮಾರ್‌ ಅವರು ಅದಕ್ಕೆ ಸ್ಪಂದನೆ ನೀಡಿದ್ದಾರೆ. ಕೆಲ ಹೊತ್ತಿನ ನಂತರ ಭೇಟಿಗೆ ಅವಕಾಶ ನೀಡುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದರು. ಇನ್ನು ಮನವಿ ಸ್ವೀಕರಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ಮನವಿ ಸಲ್ಲಿಸಿದ್ದರಲ್ಲಿ ತಪ್ಪೇನೂ ಇಲ್ಲ. ಪ್ರಜಾಪ್ರಭುತ್ವದಲ್ಲಿ ಧರಣಿ, ಹೋರಾಟ ನಡೆಯಬೇಕು ಎಂದು ಹೇಳಿದರು.

 

Share Post