BengaluruCrime

ಮಗಳಿಗೆ ನೇಣು ಹಾಕಿದ ದಂತ ವೈದ್ಯೆ; ನಂತರ ಏನು ಮಾಡಿದ್ದಾರೆ ಗೊತ್ತಾ..?

ಬೆಂಗಳೂರು; ಕೆಲ ದಿನಗಳ ಹಿಂದೆಯಷ್ಟೇ ದಂತವೈದ್ಯೆಯೊಬ್ಬರು ತನ್ನ ಪುಟ್ಟ ಮಗುವನ್ನು ಅಪಾರ್ಟ್‌ಮೆಂಟ್‌ ಮೇಲಿಂದ ಕೆಳಗೆ ನೂಕಿ ಸಾಯಿಸಿದ್ದಳು. ಈ ಘಟನೆ ಇನ್ನೂ ಹಸಿರಾಗಿರುವಾಗಲೇ ಇಂತಹದ್ದೇ ಮತ್ತೊಂದು ಘಟನೆ ಬನಶಂಕರಿಯಲ್ಲಿ ನಡೆದಿದೆ.

ದಂತವೈದ್ಯೆಯೊಬ್ಬರು ತನ್ನ ಹತ್ತು ವರ್ಷದ ಮಗಳಿಗೆ ನೇಣು ಹಾಕಿ ತಾನೂ ಆತ್ಮಹತ್ಯೆಗೆ ಶರಣಾಗಿದಾರೆ.  ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ ಮಾಡಿದ್ದಾರೆ. ನಂತರ ಅವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಡ – ಹೆಂಡತಿ ಇಬ್ಬರೂ ಕ್ಲಿನಿಕ್ ನಡೆಸುತ್ತಿದ್ದರು. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಈಗ ಪತಿ ನಾರಾಯಣ್ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post