BengaluruPolitics

ಬಿಜೆಪಿಗೆ ಗುಡ್‌ಬೈ ಹೇಳಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ

ಬೆಂಗಳೂರು; ಟಿಕೆಟ್‌ ಸಿಗದಿದ್ದಕ್ಕೆ ಬೇಸತ್ತಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಿಗೆ ಪತ್ರದ ಮೂಲಕ ಅವರು ರಾಜೀನಾಮೆಯನ್ನು ರವಾನಿಸಿದ್ದಾರೆ. ಬಿಜೆಪಿಯ ಎರಡು ಪಟ್ಟಿಗಳು ಘೋಷಣೆಯಾಗುತ್ತಿದ್ದಂತೆ ಬಂಡಾಯ ಹೆಚ್ಚಾಗಿದ್ದು, ಹಲವರು ಪಕ್ಷ ತೊರೆದಿದ್ದಾರೆ. ಇನ್ನೂ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಿಂದ ಒಂದು ಕಾಲ ಹೊರಗಿಟ್ಟಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿರುವ ಎಂಪಿ ಕುಮಾರಸ್ವಾಮಿಯವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಹರಿಹಾಯ್ದಿದ್ದಾರೆ. ನನಗೆ ಟಿಕೆಟ್‌ ಕೈತಪ್ಪಿರುವುದಕ್ಕೆ ಸಿ.ಟಿ.ರವಿಯವರೇ ಕಾರಣ. ಸಿ.ಟಿ.ರವಿ ಓದ್ಕೊಂಡು ಬಂದಿಲ್ಲ, ಆರ್‌ಎಸ್‌ಎಸ್‌ ಜತೆ ಇದ್ದು ಮಾತಾಡೋದನ್ನಷ್ಟೇ ಕಲಿತುಕೊಂಡಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ. ಸಿ.ಟಿ.ರವಿ ಬಿಜೆಪಿಯನ್ನು ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಅಂತಾನೂ ಕಿಡಿ ಕಾರಿದ್ದಾರೆ.

Share Post