BengaluruCinemaNational

ರಾಧಿಕಾ ಕುಮಾರಸ್ವಾಮಿ ಪ್ಯಾನ್‌ ಇಂಡಿಯಾ ಚಿತ್ರ ಅಜಾಗ್ರತಾಗೆ ಮುಹೂರ್ತ

ಹೈದರಾಬಾದ್‌; ರಾಧಿಕಾ ಕುಮಾರಸ್ವಾಮಿಯವರು ಪ್ಯಾನ್‌ ಇಂಡಿಯಾ ಸಿನಿಮಾ ಒಂದರಲ್ಲಿ ನಟಿಸುತ್ತಿದಾರೆ. ಏಳು ಭಾಷೆಗಳನ್ನು ಚಿತ್ರ ನಿರ್ಮಾಣವಾಗಿದ್ದು, ಹೈದರಾಬಾದ್‌ನಲ್ಲಿ ಈ ಚಿತ್ರದ ಮುಹೂರ್ತ ನೆರವೇರಿತು. ಈ ಚಿತ್ರಕ್ಕೆ ಅಜಾಗ್ರತಾ ಎಂದು ಹೆಸರಿಡಲಾಗಿದೆ.

ಖ್ಯಾತ ತೆಲುಗು ನಿರ್ಮಾಪಕ ಎ.ಎಂ.ಮುನಿರತ್ನಂ ಅವರು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಳಕ ತೋರಿಸಿದರು. ಬಾಲಿವುಡ್ ನ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕ ನಟರಾಗಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಚಿತ್ರತಂಡದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ರವಿರಾಜ್‌ ಎಂಬುವವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಶಶಿಧರ್‌ ಆಕ್ಷನ್‌ ಕಟ್‌ ಹೇಳುತ್ತಿದ್ಧಾರೆ. ಯಾವುದೇ ಡಬಲ್‌ ಮಾಡವೇ ಏಳೂ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ಮಾಡಲಾಗುತ್ತದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Share Post