BengaluruPolitics

ಡಿ.ಕೆ.ಶಿವಕುಮಾರ್‌ ಭೇಟಿಯಾದ ಮುನಿರತ್ನ; ಕ್ಷೇತ್ರದ ಅನುದಾನದ ಬಗ್ಗೆ ಡಿಕೆಶಿ ಏನಂದ್ರು..?

ಬೆಂಗಳೂರು; ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ನೀಡಿದೇ ತಾರತಮ್ಯ ಮಾಡಿದ್ದಾರೆಂದು ಶಾಸಕ ಮುನಿರತ್ನ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ ಇಂದು ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸ್ಥಳಕ್ಕೇ ಹೋಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದರು. ಅನಂತರ ಡಿ.ಕೆ.ಶಿವಕುಮಾರ್‌ ಅವರು ಭೇಟಿಗೆ ಅವಕಾಶ ನೀಡಿದ್ದು, ಶಾಸಕ ಮುನಿರತ್ನ ಅವರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿಕೆಶಿ ಜೊತೆ ಚರ್ಚೆ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ವೇಳೆ ರಾಜರಾಜೇಶ್ವರಿ ನಗರಕ್ಕೆ 120ಕ್ಕೂ ಹೆಚ್ಚು ಕೋಟಿ ಹಣವನ್ನು ಮೀಸಲಿಡಲಾಗಿತ್ತು. ಆದ್ರೆ ಅದನ್ನು ಕಡಿತ ಮಾಡಿ ಬೇರೆ ಕ್ಷೇತ್ರಗಳಿಗೆ ನೀಡಲಾಗಿದೆ. ಇದು ರಾಜಕೀಯ ದುರುದ್ದೇಶ ಎಂದು ಮುನಿರತ್ನ ಆರೋಪ ಮಾಡಿದ್ದರು. ಇದೀಗ ಡಿ.ಕೆ.ಶಿಯವರ ಸದಾಶಿವನಗರದ ನಿವಾಸದಲ್ಲಿ ಮುನಿರತ್ನ ಅವರು ಡಿ.ಕೆ.ಶಿವಕುಮಾರ್‌ ಅವರ ಜೊತೆ ಮಾತನಾಡಿದ್ದು, ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಡಿಕೆಶಿ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

Share Post