BengaluruCrime

ಶಿವಮೂರ್ತಿಗೆ ಜಾಮೀನು; ಆದ್ರೂ ಬಿಡುಗಡೆ ಇಲ್ಲ

ಬೆಂಗಳೂರು; ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಳೆದ 13 ತಿಂಗಳಿಂದ ಜೈಲು ವಾಸ  ಅನುಭವಿಸುತ್ತಿದ್ದ  ಮುರುಘಾ‌ಮಠದ ಶಿವಮೂರ್ತಿಗೆ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ.

  ಹೈಕೋರ್ಟ್ ಇಂದು ಶಿವಮೂರ್ತಿಗೆ ಜಾಮೀನು ನೀಡಿದ್ದು ಹಲವು ಷರತ್ತುಗಳನ್ನು ವಿಧಿಸಿದೆ.

 ಅದರಂತೆ, ಚಿತ್ರದುರ್ಗ ಮುರುಘಾ ಮಠಕ್ಕೆ ಪ್ರವೇಶಿಸುವಂತಿಲ್ಲ. ಪಾಸ್‌ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು ಎಂದು ಹೈಕೋರ್ಟ್​ ಸೂಚಿಸಿದೆ.

 

ಇಷ್ಟೇ ಅಲ್ಲದೆ, ಕೋರ್ಟ್‌ ವಿಚಾರಣೆಗೆ‌ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಹಾಜರಾಗಬೇಕು. ಇಂತಹ ಕೃತ್ಯಗಳನ್ನು ಪುನರಾವರ್ತನೆ ಮಾಡುವಂತಿಲ್ಲ ಎಂದು ಕೋರ್ಟ್ ಸೂಚನೆ ನೀಡಿದೆ.

ಜಾಮೀನು ಸಿಕ್ಕಿದರೂ ಸದ್ಯಕ್ಕೆ ಶಿವಮೂರ್ತಿಗೆ ಜೈಲಿನಿಂದ ಬಿಡುಗಡೆ ಸಾಧ್ಯವಿಲ್ಲ. ಯಾಕೆಂದರೆ ಅವರ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಅವುಗಳ ವಿಚಾರಣೆ ನಡೆಯುತ್ತಿದೆ. ಮತ್ತೊಂದು ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಬಾಕಿ ಇದೆ. ಅದರಲ್ಲಿ ಜಾಮೀನು ದೊರೆಯದೆ ಅವರು ಜೈಲಿನಿಂದ ಬಿಡುಗಡೆಯಾಗೋದಕ್ಕೆ ಸಾಧ್ಯವಿಲ್ಲ

Share Post