Bengaluru

ಕಾಂಗ್ರೆಸ್‌, ಜೆಡಿಎಸ್‌ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ; ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರು: ಬಿಜೆಪಿಯ ನಾಯಕರು ಯಾರೂ ಬೇರೆ ಪಕ್ಷದ ಪಕ್ಷದ ಸಂಪರ್ಕದಲ್ಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ಪಕ್ಷದವರು ಯಾರೂ ಪಕ್ಷ ಬಿಡಲು ರೆಡಿ ಇಲ್ಲ. ಬೇರೆ ಪಕ್ಷದವರೇ ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ನಾಯಕರು ಅಧಿಕಾರಕ್ಕೆ ಬರುತ್ತೇವೆಂದು ಹಗಲುಕನಸು ಕಾಣುತ್ತಿದ್ದಾರೆ. ಇದಕ್ಕಾಗಿ ಕುತಂತ್ರ ಮಾಡಿ ಜನರು ಮನಸ್ಸು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ಅದು ಸಾಧ್ಯವಾಗುವುದಿಲ್ಲ ಎಂದು ನಳಿನ್‌ ಕುಮಾರ್‌ ಕಟೀಲ್‌ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ನಮ್ಮ ಪಕ್ಷದವರು ಯಾರೂ ಬಹಿರಂಗವಾಗಿ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಮಾಧ್ಯಮದಲ್ಲಿ ಮಾತನಾಡುವವರನ್ನು ಕರೆದು ಮಾತನಾಡುತ್ತೇನೆ. ಈ ಬಗ್ಗೆ ಎಚ್ಚರಿಕೆ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Share Post