Bengaluru

ಮಂಗಳೂರು ಜನರ ಪ್ರೀತಿಗೆ ವಿನಮ್ರನಾಗಿದ್ದೇನೆ; ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್‌

ಬೆಂಗಳೂರು; ಮಂಗಳೂರಿನಲ್ಲಿ ನಿನ್ನೆ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ. ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ಟ್ವೀಟಿಸಿದ್ದಾರೆ.

ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆ ಮಾಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 3,800 ಕೋಟಿ ರೂಪಾಯಿ ಮೊತ್ತದ 8 ಯೋಜನೆಗಳಿಗೆ ಚಾಲನೆ ನೀಡಿದ್ದರು. ಮೈದಾನದಲ್ಲಿ ಅಪಾರ ನೆರೆದಿದ್ದ ಜನರು ‘ಮೋದಿ… ಮೋದಿ…’ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು.

Share Post