BengaluruPolitics

ಸೋನಿಯಾ, ರಾಹುಲ್‌ಗೆ ಸಮನ್ಸ್‌; ಇಡಿ ಕಚೇರಿಗಳ ಮುಂದೆ ಕಾಂಗ್ರೆಸ್‌ ಪ್ರೊಟೆಸ್ಟ್‌

ಬೆಂಗಳೂರು; ಸರ್ಕಾರಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೂಡಾ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಜಾರಿ ನಿರ್ದೇಶನಾಲಯದ ಮುಂದೆ ಧರಣಿ ನಡೆಸಿದರು.

 

ನ್ಯಾನಷಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಸೋನಿಯಾಗಾಂಧಿಯವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್‌ ಜಾರಿ ಮಾಡಿದ್ದಾರೆ. ಇಂದು ರಾಹುಲ್‌ ಗಾಂಧಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಆದ್ರೆ, ಇದು ದ್ವೇಷದ ರಾಜಕಾರಣದ ಭಾಗ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜಾರಿ ನಿರ್ದೇಶನಾಲಯಗಳ ಮುಂದೆ ಕಾಂಗ್ರೆಸ್‌ ಧರಣಿ ನಡೆಸುತ್ತಿದೆ.

 

 

Share Post