Bengaluru

ಸ್ವಾತಂತ್ರ್ಯ ಅಮೃತ ಮಹೋತ್ಸವ; ಹಲವು ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು; ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಲವು ಯೋಜನೆಗಳನ್ನು ರಾಜ್ಯದ ಜನತೆಗೆ ಘೋಷಣೆ ಮಾಡಿದ್ದಾರೆ. ಅದರ ವಿವರ ಈ ಕೆಳಗಿನಂತಿದೆ.

ಸಿಎಂ ಬೊಮ್ಮಾಯಿ ಘೋಷಣೆಗಳು
೧.. ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆ\
೨. ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100 ರಷ್ಟು ಶೌಚಾಲಯಗಳ ನಿರ್ಮಾಣಕ್ಕೆ 250 ಕೋಟಿ ರೂಪಾಯಿ
೩. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ ₹50 ಸಾವಿರವರೆಗೆ ಸಾಲ-ಸಹಾಯಧನ
೪. ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ
೫. ರಾಜ್ಯದಲ್ಲಿ ಹೊಸದಾಗಿ 4,050 ಅಂಗನವಾಡಿ ಕೇಂದ್ರ. 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಕಲ್ಪಿಸಲಾಗುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ
೬. ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ

Share Post