BengaluruCrime

ಮೈಸೂರು ಹಲವೆಡೆ ಎನ್‌ಐಎ ದಾಳಿ; ಹಲವರ ಅರೆಸ್ಟ್‌

ಮೈಸೂರು; ಮೈಸೂರು ನಗರದಲ್ಲಿ ಎನ್‌ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಪಿಎಫ್‌ಐ ಮಾಜಿ ಕಾರ್ಯದರ್ಶಿ ಸುಲೈಮಾನ್‌ ಎಂಬುವವರನ್ನು ಅರೆಸ್ಟ್‌ ಮಾಡಿದ್ದಾರೆ. ಮಂಡಿ ಮೊಹಲ್ಲಾದ ಸುಲೈಮಾನ್ ಮನೆ ಮೇಲೆ ದಾಳಿ ಮುಂಜಾನೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು, ಸುಲೈಮಾನ್‌ರನ್ನು ಬಂಧಿಸಿದ್ದಾರೆ.

ಅಜ್ಞಾತ ಸ್ಥಳಕ್ಕೆ ಸುಲೈಮಾನ್‌ರನ್ನು ಕರೆದುಕೊಂಡು ಹೋಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಪ್ರವೀನ್‌ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್ ಬೆಳ್ಳಾರೆ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತ ಹುಬ್ಬಳ್ಳಿಯಲ್ಲೂ ಎನ್ಐಎ ದಾಳಿ ನಡೆಸಲಾಗಿದ್ದು ಎಸ್ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾ‌ಬಂದ್ ಎಂಬುವವರನ್ನು ವಿಚಾರಣೆಗೊಳಪಡಿಸಿದ್ದಾರೆ.

Share Post