BengaluruCrime

ಬೆಂಗಳೂರು, ಬಳ್ಳಾರಿಯಲ್ಲಿ ಮತ್ತೆ ಎನ್‌ಐಎ ದಾಳಿ; 20ಕ್ಕೂ ಹೆಚ್ಚು ಕಡೆ ಪರಿಶೀಲನೆ

ಬೆಂಗಳೂರು; ಭಯೋತ್ಪಾದನೆ ನಿಗ್ರಹದ ಹೊಣೆ ಹೊತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೆ ಬೆಂಗಳೂರಿನಲ್ಲಿ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಎರಡು ಬಾರಿ ಬೆಂಗಳೂರು ಹಾಗೂ ಕೇರಳದ ಹಲವು ಭಾಗಗಳಲ್ಲಿ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಹಲವರನ್ನು ಬಂಧಿಸಲಾಗಿತ್ತು. ಬೆಂಗಳೂರಿನಲ್ಲಿ ಕೂಡಾ ಶಂಕಿತ ಉಗ್ರ ಅಲಿ ಅಬ್ಬಾಸ್‌ನನ್ನು ಬಂಧಿಸಲಾಗಿತ್ತು. ಇದೀಗ ಎನ್‌ಐಎ ಅಧಿಕಾರಿಗಳು 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಮುಂತಾದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ  ಶಂಕಿತ ಉಗ್ರ ಅಲಿ ಅಬ್ಬಾಸ್‌ ನಿಂದ  16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಲಾಗಿತ್ತು. ಮೊಬೈಲ್‌, ಲ್ಯಾಪ್‌ಟಾಪ್‌ ರಿಟ್ರೀವ್‌ ಮಾಡಲಾಗಿದ್ದು, ಅದರಲ್ಲಿ ಮಾಹಿತಿ ಮೇರೆಗೆ ಮತ್ತೊಮ್ಮೆ ದಾಳಿ ಮಾಡಲಾಗಿದೆ.

ಇನ್ನು ಬಳ್ಳಾರಿಯ 9 ಕಡೆ ಕೂಡಾ ಎನ್‌ಐಎ ದಾಳಿ ಮಾಡಲಾಗಿದೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಕೂಡಾ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

 

Share Post