Bengaluru

ನಿರ್ಮಲಾ ಸೀತಾರಾಮನ್‌ಗೆ ಶುಭ ಕೋರಿದ ಬಿಎಸ್‌ವೈ

ಬೆಂಗಳೂರು; ರಾಜ್ಯ ವಿಧಾನಸಭೆಯಿಂದ ಆಯ್ಕೆಯಾಗುವ ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ರಾಜ್ಯದಿಂದ ಅವರು ಮೂರನೇ ಬಾರಿ ರಾಜ್ಯಸಭೆಗೆ ಆಯ್ಕೆ ಬಯಸಿದ್ದಾರೆ. ಇಂದು ಅವರು ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಮಲಾ ಸೀತಾರಾಮನ್‌ ಅವರಿಗೆ ಶುಭ ಕೋರಿದರು.

ಬಿಜೆಪಿಯಿಂದ ರಾಜ್ಯದಲ್ಲಿ ನಿರ್ಮಲಾ ಸೀತಾರಾಮನ್‌, ಲೆಹರ್‌ ಸಿಂಗ್‌ ಹಾಗೂ ಜಗ್ಗೇಶ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ.

Share Post