Bengaluru

ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆಗೆಯೋದಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಉಚಿತ ಯೋಜನೆಗಳಿಂದಾಗಿ ಸಾವಿರಾರು ಕೋಟಿ ವ್ಯಯವಾಗುತ್ತಿದೆ. ಈ ನಷ್ಟ ಸರಿದೂಗಿಸಲು, ಗ್ರಾಮ ಪಂಚಾಯತ್‌ಗೆ ಒಂದರಂತೆ ಬಾರ್‌ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹೊಸ ಮದ್ಯದಂಗಡಿಗಳನ್ನು ಯಾವ ಕಾರಣಕ್ಕೂ ತೆರೆಯೋದಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧವಿದೆ. ಹೀಗಾಗಿ ಸರ್ಕಾರಕ್ಕೆ ಹಣಕಾಸಿನ ಕೊರತೆ  ಇದ್ದರೂ ಕೂಡಾ ಮದ್ಯದಂಗಡಿಗಳು ತೆರೆಯುವುದಕ್ಕೆ ಹೊಸ ಲೈಸೆನ್ಸ್‌ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ.

Share Post