BengaluruPolitics

ಸಂಚಾರ ದಟ್ಟಣೆ ಕಡಿಮೆ ಮಾಡಲು ಹೊಸ ಟ್ಯಾಕ್ಸ್‌ ಹಾಕಲ್ಲ; ಡಿಕೆಶಿ ಸ್ಪಷ್ಟನೆ

ಬೆಂಗಳೂರು; ಬೆಂಗಳೂರು ನಗರದಲ್ಲಿ ಸಂಚಾರದಟ್ಟಣೆ ಕಡಿಮೆ ಮಾಡಲು ವಾಹನಗಳಿಗೆ ಯಾವುದೇ ಹೊಸ ಟ್ರಾಫಿಕ್‌ ಟ್ಯಾಕ್ಸ್‌ ಹಾಕುವುದಿಲ್ಲ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿರುವ ಅವರು, ನಮ್ಮ ಮುಂದೆ ಅಂತಹ ಯಾವುದೇ ಯೋಚನೆ ಇಲ್ಲ ಎಂದಿದ್ದಾರೆ.

ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸುದ್ದಿಯಾಗಿತ್ತು. ಇದಾದ ಮೇಲೆ ಸರ್ಕಾರ ಎಚ್ಚೆತ್ತುಕೊಂಡು ಅಂತಹ ಯಾವುದೇ ಟ್ಯಾಕ್ಸ್‌ ಹಾಕವುದಿಲ್ಲ ಎಂದು ಹೇಳಿದೆ. ಇರುವ ಟ್ಯಾಕ್ಸ್‌ನ್ನು ಸರಿಯಾಗಿ ಕಟ್ಟಿದರೆ ಸಾಕು. ನಾವು ಯಾವ ಟ್ಯಾಕ್ಸ್‌ನ್ನೂ ಹೊಸದಾಗಿ ಹಾಕುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

 

Share Post