BengaluruDistrictsPolitics

ಯಡಿಯೂರಪ್ಪರನ್ನು ಮುಗಿಸಲು ಯಾರಿಗೂ ಆಗಲ್ಲ; ಬಿ.ವೈ.ವಿಜಯೇಂದ್ರ

ಮೈಸೂರು; ಯಡಿಯೂರಪ್ಪ ಅವರು ಬಿಜೆಪಿಗೆ ಒಂದು ಶಕ್ತಿ ಇದ್ದಂತೆ. ಆ ಶಕ್ತಿಯನ್ನು ಯಾರ ಕೈಯಿಂದಲೂ ಮುಗಿಸೋದಕ್ಕೆ ಆಗೋದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ವರುಣಾದಲ್ಲಿ ವಿ.ಸೋಮಣ್ಣ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಕಾಮನ್‌ ಮ್ಯಾನ್‌ ಎಂದೇ ಹೆಸರಾಗಿರುವ ಬಸವರಾಜ ಬೊಮ್ಮಾಯಿ ಅವಧಿಯಲ್ಲೂ ಹಲವಾರು ಜನಪರ ಕಾರ್ಯಕ್ರಮಗಳು ನಡೆದಿವೆ. ಹೀಗಾಗಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ವರುಣಾ ಕ್ಷೇತ್ರದಲ್ಲೂ ಬಿಜೆಪಿ ಅಲೆ ಇದೆ. ಇಲ್ಲಿನ ಜನ ಬದಲಾವಣೆ ಬಯಸಿದ್ದಾರೆ. ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಅವರು ಹೇಳಿದರು.

Share Post