BengaluruPolitics

ಡಿಕೆಶಿ ಶಾಶ್ವತವಾಗಿ ತಿಹಾರ್‌ ಜೈಲಿಗೆ ಹೋದ್ರೂ ಅಚ್ಚರಿ ಇಲ್ಲ; ಹೆಚ್‌.ಡಿ.ಕುಮಾರಸ್ವಾಮಿ

ರಾಮನಗರ; 2014ಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗೋದು ಪಕ್ಕಾ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶಾಶ್ವತವಾಗಿ ತಿಹಾರ್‌ ಜೈಲಿಗೆ ಹೋದರೂ ಅಚ್ಚರಿ ಇಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಜೆಡಿಎಸ್‌ ಜಿಲ್ಲಾ ಮುಖಂಡರ ಜೊತೆಗಿನ ಸಭೆಯಲ್ಲಿ ಕುಮಾರಸ್ವಾಮಿ ಈ ರೀತಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನವಾಗೋದಕ್ಕೆ ಡಿ.ಕೆ.ಶಿವಕುಮಾರ್‌ ಅವರೇ ಕಾರಣ ಎಂದಿರುವ ಹೆಚ್ಡಿಕೆ, ಕಾಂಗ್ರೆಸ್‌ ಸರ್ಕಾರ ಪತನವಾಗೋದು ಖಚಿತ ಜೊತೆಗೆ ಡಿ.ಕೆ.ಶಿವಕುಮಾರ್‌ ತಿಹಾರ್‌ ಜೈಲು ಸೇರೋದೂ ಗ್ಯಾರೆಂಟಿ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್‌ ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಹೆಚ್ಡಿಕೆ ಆಕ್ರೋಶ ಹೊರಹಾಕಿದ್ದಾರೆ.

Share Post