BengaluruPolitics

ಇಲ್ಲಲ್ಲ, ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ; ಬಿಜೆಪಿ ಹೋರಾಟಕ್ಕೆ ಡಿಕೆಶಿ ಟಾಂಗ್‌

ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪನವರು ಹಾಗೂ ಬಿಜೆಪಿ ನಾಯಕರು ಇಲ್ಲಲ್ಲ, ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಡೀಸೆಲ್‌, ಪೆಟ್ರೋಲ್‌, ಅಡುಗೆ ಎಣ್ಣೆ ದರಗಳು ಏರಿಕೆಯಾಗಿವೆ. ಇದರ ವಿರುದ್ಧ ಮೊದಲು ಧರಣಿ ಮಾಡಬೇಕಿದೆ. ಕೇಂದ್ರ ಸರ್ಕಾರಕ್ಕೆ ನೀವು ಮನವಿ ಮಾಡಬೇಕು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಿ ಎಂದು ಆಗ್ರಹ ಮಾಡಬೇಕು. ಮೊದಲು ನೀವು ದೆಹಲಿಗೆ ಹೋಗಿ ನಿಮ್ಮದೇ ಸರ್ಕಾರದ ವಿರುದ್ಧ ಧರಣಿ ಮಾಡಬೇಕು. ಇಲ್ಲಲ್ಲ, ಧರಣಿ ಮಾಡೋದು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post