Bengaluru

ಸಚಿವ ಅಶ್ವತ್ಥನಾರಾಯಣ ವಿರುದ್ಧ ಎನ್‌ಎಸ್‌ಯುಐ ಪ್ರತಿಭಟನೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಚಿವರ ಸಹೋದರ ಭಾಗಿಯಾಗಿದ್ದಾರೆಂದು ಆರೋಪಿಸಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿತು. ಮಲ್ಲೇಶ್ವರಂನ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಯಿತು. ಸಚಿವ ಅಶ್ವತ್ಥನಾರಾಯಣ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ದಿಕ್ಕಾರ ಕೂಗಿದರು.

ಬ್ರೀಫ್‌ಕೇಸ್‌ನಿಂದ ಹಣ ತೆಗೆದು ಅದನ್ನು ಚೆಲ್ಲಾಡಿ ಅಣಕು ಪ್ರದರ್ಶನ ಮಾಡಿದರು. ಪ್ರತಿಭಟನೆಯಲ್ಲಿ ರಾಮಲಿಂಗಾರೆಡ್ಡಿ, ಬಿ.ಕೆ.ಹರಿಪ್ರಸಾದ್‌ ಭಾಗಿಯಾಗಿದ್ದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

Share Post