Bengaluru

ಭದ್ರತಾ ಲೋಪ ವಿಚಾರ; ಕಾಂಗ್ರೆಸ್‌ ಯಾವ ಮಟ್ಟಕ್ಕಾದರೂ ಇಳಿಯುತ್ತೆ- ಅಶ್ವತ್ಥನಾರಾಯಣ

ಬೆಂಗಳೂರು: ಪಂಜಾಬ್‌ನಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ಲೋಪಕ್ಕೆ ಸಚಿವ ಡಾ.ಅಶ್ವತ್ಥನಾರಾಯಣ ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭದ್ರತಾ ಲೋಪ ಮಾಡಿ, ದೇಶದ ಪ್ರಧಾನಿಗೆ ಅಗೌರವ ತೋರಿಸುವುದು ಸರಿಯಲ್ಲ ಎಂದರು.

ಭದ್ರತಾ ಲೋಪಕ್ಕೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಸಚಿವ ಅಶ್ವತ್ಥನಾರಾಯಣ, ಕಾಂಗ್ರೆಸ್‌ ಪಕ್ಷದ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್‌ ಪಕ್ಷ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ ಎಂಬುದಕ್ಕೆ ಈ ಘಟನೆ ಉದಾಹರಣೆ ಎಂದು ಅವರು ಹೇಳಿದರು.

 

Share Post