BengaluruPolitics

ಕನಕಪುರದಲ್ಲಿ ಆಪರೇಷನ್‌ ಹಸ್ತ; ನಾರಾಯಣಗೌಡ, ಪ್ರಭಾಕರರೆಡ್ಡಿ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು; ಇತ್ತೀಚೆಗಷ್ಟೇ ಕನಕಪುರದಲ್ಲಿ ಪ್ರವಲ ಜೆಡಿಎಸ್‌ ನಾಯಕರಾಗಿದ್ದ ವಿಶ್ವನಾಥ್‌ ಅವರು ಕಾಂಗ್ರೆಸ್‌ ಸೇರಿದ್ದರು. ಇದೀಗ ಮತ್ತಿಬ್ಬರು ಜೆಡಿಎಸ್‌ ನಾಯಕರು ಕಾಂಗ್ರೆಸ್‌ಗೆ ಬಂದಿದ್ದಾರೆ. ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ನಾರಾಯಣಗೌಡ ಹಾಗೂ ಬೆಂಗಳೂರು ದಕ್ಷಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರಭಾಕರರೆಡ್ಡಿ ಇಂದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್‌ಗೆ ಮತ್ತಷ್ಟು ಬಲ ಬಂದಿದೆ.

ನಾರಾಯಣಗೌಡ ಅವರು ೨೦೧೮ರ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈಗ ಅವರೇ ಕಾಂಗ್ರೆಸ್‌ ಸೇರಿದ್ದಾರೆ. 2008ರಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇವಲ ಏಳು ಸಾವಿರ ಮತಗಳಿಂದ ಸೋತಿದ್ದ ವಿಶ್ವನಾಥ್‌ ಕೂಡಾ ಕೆಲ ತಿಂಗಳ ಹಿಂದೆ ಕಾಂಗ್ರೆಸ್‌ ಸೇರಿದ್ದರು. ಇದೀಗ ನಾರಾಯಣಗೌಡ ಸೇರ್ಪಡೆ ಡಿಕೆಶಿಗೆ ಶಕ್ತಿ ಬಂದಂತಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಾರಾಯಣಗೌಡ ಹಾಗೂ ಪ್ರಭಾಕರರೆಡ್ಡಿಯವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬರಮಾಡಿಕೊಂಡಿದ್ದಾರೆ. ಪ್ರಭಾಕರರೆಡ್ಡಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಈ ಬಾರಿಯೂ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದ್ರೆ, ಅವರಿಗೆ ಟಿಕೆಟ್‌ ನೀಡಿಲ್ಲ. ಹೀಗಾಗಿ ಬೇಸರಗೊಂಡು ಪ್ರಭಾಕರ ರೆಡ್ಡಿ ಕಾಂಗ್ರೆಸ್‌ ಸೇರಿದ್ದಾರೆ.

Share Post