BengaluruPolitics

ವಿಪಕ್ಷ ಮಹಾಮೈತ್ರಿ ಸಭೆ; ಸೋನಿಯಾ, ರಾಹುಲ್‌, ಮಮತಾ ಆಗಮನ

ಬೆಂಗಳೂರು; ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾಮೈತ್ರಿ ಸಭೆ ನಡೆಯುತ್ತಿದೆ. ಈಗಾಗಲೇ ಹಲವು ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಯಕರನ್ನು ಸ್ವಾಗತಿಸಿದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್‌ ಯಾದವ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವತ್ತು ಹಾಗೂ ನಾಳೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಹಾಗೂ ಪ್ರಧಾನಿ ಅಭ್ಯರ್ಥಿ ಘೋಷಣೆ ಸಂಬಂಧ ಚರ್ಚೆಗಳು ನಡೆಯಲಿವೆ.

Share Post