Bengaluru

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆಗೆ ವಿರೋಧ; ಡಿಕೆಶಿ ಬೆಂಬಲ

ಬೆಂಗಳೂರು; ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇಂದು ಮೇಲ್ಸೇತುವೆ ಕಾಮಗಾರಿ ನಡೆಸದಂತೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಈ ಹೋರಾಟಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಾಥ್‌ ನೀಡಿದರು. ಹೋರಾಟದಲ್ಲಿ ಪಾಲ್ಗೊಂಡ ಅವರು ಮಲ್ಲೇಶ್ವರಂ ನಿವಾಸಿಗಳ ಬೆಂಬಲಕ್ಕೆ ನಿಂತರು.

 

Share Post