BengaluruPolitics

ಜನರ ನಂಬಿಕೆ, ವಿಶ್ವಾಸ ಹುಸಿ ಮಾಡೋದಿಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದ ಜನರ ನಂಬಿಕೆ ಹಾಗೂ ವಿಶ್ವಾಸವನ್ನು ನಾನು ಹುಸಿ ಮಾಡೋದಿಲ್ಲ. ಇದು ನನ್ನ ಅತ್ಯುನ್ನತ ಗ್ಯಾರೆಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾರೂ ರಾಜಕೀಯ ಪ್ರೇರಿತ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡಬೇಡಿ ಎಂದು ಜನರಲ್ಲಿ ಮನವಿ ಮಾಡಿದರು.

ಜನತೆಯೇ ನನ್ನ ಪಾಲಿನ ಜನಾರ್ದನರು. ನನ್ನ ಹಾಗೂ ನಮ್ಮ ಸರ್ಕಾರದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ನಾವು ಈಗಾಗಲೇ ಹೇಳಿದಂತೆ ನಡೆದಿದ್ದೇವೆ. ಈಗಾಗಲೇ ಮೂರು ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದೇವೆ. ಮುಂದಿನ ತಿಂಗಳು ಇನ್ನೊಂದು ಗ್ಯಾರೆಂಟಿ ಜಾರಿಯಾಗಲಿದೆ. ಐದನೇ ಗ್ಯಾರೆಂಟಿಯನ್ನೂ ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Share Post