BengaluruPolitics

ವೈಯಕ್ತಿಕ ನಿಂದನೆ ಮಾಡೋದು ಸಂಸ್ಕೃತಿ ಅಲ್ಲ; ಯತ್ನಾಳ್‌ ವಿರುದ್ಧ ಬೊಮ್ಮಾಯಿ ಕಿಡಿ

ಬೆಂಗಳೂರು; ಸಚಿವ ನಿರಾಣಿ ವಿರುದ್ಧ ಮತನಾಡಿದ್ದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವ್ರು, ವೈಯಕ್ತಿಕ ನಿಂದನೆ ಮಾಡೋದ ಸಂಸ್ಕೃತಿ ಅಲ್ಲ. ಯತ್ನಾಳ್‌ ಅವರ ಮಾತು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳುವ ಮೂಲಕ ಸಿಎಂ ಬೊಮ್ಮಾಯಿಯವರು ಯತ್ನಾಳ್‌ಗೆ ವಾರ್ನಿಂಗ್‌ ಕೊಟ್ಟಿದ್ದಾರೆ.

ನಿನ್ನೆ ಮಾತನಾಡಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವ್ರು ನಿರಾಣಿ ಪಿಂಪ್‌ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಬೀದಿಯಲ್ಲಿ ನಿಂತು ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪು ಎಂದಿದ್ದಾರೆ.

 

Share Post