BengaluruCrimePolitics

ಸಿದ್ದರಾಮಯ್ಯ ಶಾಸಕತ್ವ ಅಸಿಂಧುಗೊಳಿಸಲು ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು; ಗ್ಯಾರೆಂಟಿ ಕಾರ್ಡ್‌ಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆ ಗೆಲ್ಲಲಾಗಿದ್ದು, ಸಿದ್ದರಾಮಯ್ಯ ಅವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕೆಂದು ಆಗ್ರಹಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್‌ ಮೊರೆಹೋಗಿದ್ದಾರೆ. ಕೆ.ಎಂ.ಶಂಕರ್‌ ಎಂಬುವವರು ಹೈಕೋರ್ಟ್‌ನಲ್ಲಿ ಈ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿಕೆ ಮಾಡಿದೆ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲು ಗ್ಯಾರೆಂಟಿ ಕಾರ್ಡ್‌ಗಳೇ ಕಾರಣ. ಗ್ಯಾರೆಂಟಿ ಕಾರ್ಡ್‌ಗಳನ್ನು ನೀಡಿ ಮತದಾರರಿಗೆ ಆಮಿಷವೊಡ್ಡಲಾಗಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಚುನಾವಣೆ ಸಮಯದಲ್ಲಿ ಆಮಿಷ ಒಡ್ಡುವಂತಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕತ್ವವನ್ನು ಅನರ್ಹಗೊಳಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

 

Share Post