BengaluruCrime

ವಿಮಾನದಲ್ಲಿ ಮಹಿಳೆ ಮೇಲೆ ಮೂರ್ತ ವಿಸರ್ಜನೆ; ಆರೋಪಿ ಬೆಂಗಳೂರಲ್ಲಿ ಅರೆಸ್ಟ್‌

ಬೆಂಗಳೂರು; ನ್ಯೂಯಾರ್ಕ್‍ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಸಹಪ್ರಯಾಣಿಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ. ಸದ್ಯ ಆತನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಶಂಕರಗ್‌ ಮಿಶ್ರಾ ಎಂದು ಗುರುತಿಸಲಾಗಿದೆ.

ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿತ್ತು. ಈ ಬಗ್ಗೆ ಮಹಿಳೆ ಟಾಟಾ ಸನ್ಸ್ ಗ್ರೂಪ್‍ನ ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್‌ಗೆ ಪತ್ರ ಬರೆದಿದ್ದರು. ಈ ಬಗ್ಗೆ ದೂರು ಕೂಡಾ ದಾಖಲಿಸಲಾಗಿತ್ತು. ಅದಾದ ಮೇಲೆ ಆರೋಪಿ ತಲೆಮೆರೆಸಿಕೊಂಡಿದ್ದ. ಬೆಂಗಳೂರಿನಲ್ಲಿ ಇರುವ ಬಗ್ಗೆ ಮಾಹಿತಿ ಅರಿತ ದೆಹಲಿ ಪೊಲೀಸರು, ಬೆಂಗಳೂರಿಗೆ ಬಂದು ಬಂಧಿಸಿದ್ದಾರೆ. ಬೆಂಗಳೂರಿನ ಸಂಜಯ್ ನಗರ ಗೆಸ್ಟ್ ಹೌಸ್‍ನಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

Share Post