Bengaluru

ಸಿಎಂ ಆರೋಗ್ಯ ವಿಚಾರಿಸಿದ ಪಿಎಂ: ಕೊರೊನಾ ಪರಿಸ್ಥಿತಿ ಬಗ್ಗೆ ಮಾಹಿತಿ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಪ್ರಧಾನಿಯವರು ಆರೋಗ್ಯ ವಿಚಾರಿಸಿದ್ದಾರೆ.  ಸಂಜೆ 4:30ಕ್ಕೆ ದೂರವಾಣಿ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರು ಆರೋಗ್ಯ ಕುಶಲೋಪರಿ ವಿಚಾರಿಸಿದ್ದಾರೆ. ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದ ಪ್ರಧಾನಿ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ. ಈ ವೇಳೆ ತಮ್ಮ ಕುಟುಂಬಸ್ಥರಿಗೂ ಕೊರೊನಾ ಪಾಸಿಟಿವ್‌ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ಈ ವೇಳೆ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಪಡೆದಿದ್ದಾರೆ. ಜನವರಿ 13ರಂದು ಸಂಜೆ ಪ್ರಧಾನಯವರು ಕರೆದಿರುವ ಕೋವಿಡ್ ವರ್ಚುವಲ್ ಸಭೆಗೆ ಪೂರ್ವಭಾವಿಯಾಗಿ ಇಂದು ರಾಜ್ಯದಲ್ಲಿ  ವರ್ಚುವಲ್ ಆಗಿ ಸಭೆ ನಡೆಸುತ್ತಿರುವುದಾಗಿ ಬೊಮ್ಮಾಯಿಯವರು ತಿಳಿಸಿದ್ರು.  ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ರು.  ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದ್ದು, ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿಯವರಿಗೆ ವರದಿ ಒಪ್ಪಿಸಿದ್ರು.

 

Share Post