BengaluruPolitics

ಪ್ರಧಾನಿ ಮೋದಿ, ಅಮಿತ್‌ ಶಾ ಹತಾಶರಾಗಿದ್ದಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕಾಂಗ್ರೆಸ್‌ ಗ್ಯಾರೆಂಟಿ ಕಾರ್ಡ್‌ ಬಗ್ಗೆ ಮೋದಿ ಹಾಗೂ ಅಮಿತ್‌ ಶಾ ಟೀಕಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೋದಿ ಹಾಗೂ ಅಮಿತ್‌ ಶಾ ಅವರು ಹತಾಶೆಯಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಮೋದಿ ಮಾತನಾಡುವಾಗ ಗ್ಯಾರೆಂಟಿ ಕಾರ್ಡ್‌ ಎಕ್ಸ್‌ಫೈರ್‌ ಆಗಿದೆ ಎಂದು ಹೇಳಿದ್ದರು. ಅಮಿತ್‌ ಶಾ ಕೂಡಾ ಗ್ಯಾರೆಂಟ್‌ ಕಾರ್ಡ್‌ ಬಗ್ಗೆ ಲೇವಡಿ ಮಾಡುತ್ತಾ ಬಂದಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್‌ ಇದಕ್ಕೆ ತಿರುಗೇಟು ನೀಡಿದ್ದಾರೆ. ಮೋದಿ ಹಾಗೂ ಅಮಿತ್‌ ಶಾ ಅವರು ನಮ್ಮ ಗ್ಯಾರೆಂಟಿಗಳ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಈ ಬಾರಿ ಬಿಜೆಪಿ ಸೋಲುವುದು ಗ್ಯಾರೆಂಟಿ. ನಾವು ಅಧಿಕಾರಕ್ಕೆ ಬರುತ್ತೇವೆ. ಕೊಟ್ಟ ಗ್ಯಾರೆಂಟಿಗಳನ್ನು ಜಾರಿಗೆ ತರುತ್ತೇವೆ ಎಂದರು.

ಬಿಜೆಪಿ ಹಿಂದಿನ ಚುನಾವಣಾ ಸಮಯದಲ್ಲಿ ಹಲವಾರು ಭರವಸೆಗಳನ್ನ ನೀಡಿತ್ತು. ಆದ್ರೆ ಬಹುತೇಕ ಭರವಸೆಗಳು ಈಡೇರಿಲ್ಲ. ಆದ್ರೆ ನಾವು ಹಾಗೆ ಮಾಡೋದಿಲ್ಲ. ನಾವು ಕೊಟ್ಟ ಭರವಸೆಗಳನ್ನು ನಮ್ಮ ಸರ್ಕಾರ ಬಂದ ಕೂಡಲೇ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

Share Post