BengaluruPolitics

ಈಶ್ವರಪ್ಪಗೆ ಕರೆ ಮಾಡಿ ಮಾತಾಡಿಸಿದ ಪ್ರಧಾನಿ ಮೋದಿ

ಶಿವಮೊಗ್ಗ; ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಅವರಿಗೆ ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್‌ ಸಿಕ್ಕಿಲ್ಲ. ಜೊತೆಗೆ ಅವರ ಮಗನಿಗೂ ಟಿಕೆಟ್‌ ನಿರಾಕರಿಸಲಾಗಿದೆ. ಇದರಿಂದ ಅಸಮಾಧಾನ ಇದ್ದರೂ ಈಶ್ವರಪ್ಪ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸೋದಾಗಿ ಹೇಳಿದ್ದಾರೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಈಶ್ವರಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಈಶ್ವರಪ್ಪ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವಂತೆ ಪಕ್ಷ ಸೂಚನೆ ನೀಡಿತ್ತು. ಅದನ್ನು ಅವರು ಮಾಡಿದ್ದರು. ಅನಂತರ ಅವರ ಪುತ್ರ ಕಾಂತೇಶ್‌ಗೂ ಟಿಕೆಟ್‌ ನೀಡಲಿಲ್ಲ. ಹೀಗಿದ್ದರೂ, ಈಶ್ವರಪ್ಪ ಬಹಿರಂಗವಾಗಿ ಬೇಸರ ವ್ಯಕ್ತಪಡಿಸದೇ ಬಿಜೆಪಿ ಪಕ್ಷಕ್ಕೆ ನಿಷ್ಠೆ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಈಶ್ವರಪ್ಪ ಅವರಿಗೆ ಕರೆ ಮಾಡಿ ಈಶ್ವರಪ್ಪ ಅವರ ಪಕ್ಷನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ವೇಳೆ ಶಿವಮೊಗ್ಗ ಕ್ಷೇತ್ರದ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. ನೀವು ಹಾಗೂ ಯಡಿಯೂರಪ್ಪನವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೀರಿ. ಬಿಜೆಪಿ ಪಕ್ಷ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ ಎಂದು ಮೋದಿ ಈಶ್ವರಪ್ಪಗೆ ಹೇಳಿದ್ದಾರೆ ಎನ್ನಲಾಗಿದೆ. ಈ ವೇಳೆ ಈಶ್ವರಪ್ಪ ಅವರು ನಾನು ಸಾಮಾನ್ಯ ಕಾರ್ಯಕರ್ತ. ನನಗೆ ನೀವು ಕರೆ ಮಾಡಿರುವುದು ತುಂಬಾ ಖುಷಿ ತಂದಿದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ.

Share Post