Bengaluru

ಕೆಂಪೇಗೌಡರ ಪರಿಕಲ್ಪನೆಯಂತೆ ಬೆಂಗಳೂರು ಅಭಿವೃದ್ಧಿ; ಪ್ರಧಾನಿ ಮೋದಿ

ಬೆಂಗಳೂರು; ನಾಡಪ್ರಭು ಕೆಂಪೇಗೌಡರ ಪರಿಕಲ್ಪನೆಯಂತೆಯೇ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ದೇವನಹಳ್ಳಿ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರನ್ನು ಆರ್ಥಿಕವಾಗಿ ಅಷ್ಟೇ ಅಲ್ಲ, ಸಾಂಸ್ಕೃತಿಕವಾಗಿಯೂ ಸದೃಢಗೊಳಿಸಬೇಕೆಂದು ಕನಸು ಕಂಡಿದ್ದರು. ಬೆಂಗಳೂರು ಇಂದು ಜಾಗತಿಕ ನಗರವಾಗಿ ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ಬೆಂಗಳೂರಿನ ಪರಂಪರೆ ಸಂರಕ್ಷಿಸುವುದರ ಜೊತೆಗೆ ಆಧುನಿಕ ಸೌಲಭ್ಯಗಳನ್ನೂ ಒದಗಿಸಬೇಕು. ಈ ಕಾರ್ಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

 

Share Post