Bengaluru

ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು; ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಇಂದು ಚಾಲನೆ ದೊರೆತಿದೆ. ಈ ವಿಶೇಷ ರೈಲಿಗೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ.

ಎಂಟು ದಿನಗಳ ಪ್ರವಾಸ ಯೋಜನೆ ಇದಾಗಿದೆ. ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ  ತೀರ್ಥಯಾತ್ರಿಗಳನ್ನು ಸಬ್ಸಿ ದರದಲ್ಲಿ ಕೊಂಡೊಯ್ಯುತ್ತದೆ. ರಾಜ್ಯ ಮುಜರಾಯಿ ಇಲಾಖೆ  ಹಾಗೂ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜನೆ ಮಾಡಲಾಗಿದೆ.

ಈ ಯಾತ್ರೆ ಕೈಗೊಳ್ಳುವವರಿಗೆ 20,000 ರೂಪಾಯಿ ತಗಲುತ್ತದೆ. ಇದರಲ್ಲಿ ರಾಜ್ಯ ಸರ್ಕಾರ 5,000 ರೂಪಾಯಿ ಸಹಾಯಧನ ನೀಡುತ್ತದೆ. ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ಊಟ, ವಸತಿ ಹಾಗೂ ಇನ್ನಿತರ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ.

 

Share Post