BengaluruCrime

ಕಳ್ಳತನ ಪ್ರಕರಣದಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್‌ ಬಂಧನ

ಬೆಂಗಳೂರು; ಪೊಲೀಸರೇ ಕಳ್ಳರಾಗಿಬಿಟ್ಟರೆ ಇನ್ನು ಹಿಡಿಯೋದು ಯಾರು..? ಇಲ್ಲಿ ಇದೇ ಆಗಿರೋದು. ಯಾಕಂದ್ರೆ ಕಳ್ಳತನ ಕೇಸ್‌ ನಲ್ಲಿ ಪೊಲೀಸ್​ ಕಾನ್ಸ್​​ಟೇಬಲ್​​ ಯಲ್ಲಪ್ಪ ಎನ್ನುವಾತನ್ನನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಾಲೇಔಟ್, ಚಿಕ್ಕ ಜಾಲ, ಬನಶಂಕರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಈ ಪೊಲೀಸ್‌ ಕಾನ್ಸ್‌ಟೇಬಲ್‌ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಈ ಹಿಂದೆ ಕೂಡಾ ಇದೇ ರೀತಿ ಸಿಕ್ಕಿಬಿದ್ದಿದ್ದ ಈತನನ್ನು ಅಮಾನತು ಮಾಡಿ ತನಿಖೆಗೆ ಆದೇಶ ಹೊರಡಿಸಲಾಗಿತ್ತು. ಆದ್ರೂ ಯಲ್ಲಪ್ಪ ತನ್ನ ಚಾಳಿ ಮುಂದುವರೆಸಿದ್ದ ಎಂದು ತಿಳಿದುಬಂದಿದೆ.

 

Share Post