BengaluruPolitics

ʻಕೈʼ ನಾಯಕರ ಗೂಂಡಾಗಿರಿ ನಡೆಯೋಲ್ಲ:ಪ್ರಲ್ಹಾದ್‌ ಜೋಶಿ ಟ್ವೀಟ್‌

ಬೆಂಗಳೂರು: ಇಂದು ರಾಮನಗರದಲ್ಲಿ ಪುತ್ಥಳಿ ಅನಾವರಣ ಹಾಗೂ ವಿವಿಧ ಕಾಮಗಾರಿಗಳ ಚಾಲನೆ ವೇಳೆ ನಡೆದ ಗದ್ದಲ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್‌ ಮಾಡಿದ್ದಾರೆ. ʻರಾಜ್ಯ ಸರ್ಕಾರದ ಮುಖ್ಯಮಂತ್ರಿಯವರ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಅಶ್ವತ್ಥ್‌ ನಾರಾಯಣ್‌ ಅವರು ಮಾತನಾಡುವಾಗ ಕಾಂಗ್ರೆಸ್‌ ನಾಯಕರು ಮುನ್ನುಗ್ಗಿ ಗೂಂಡಾಗಿರಿ ವರ್ತನೆ ಪ್ರದರ್ಶಿಸಿದ್ದಾರೆ. ಅವರ ವರ್ತನೆ ಖಂಡನೀಯ ಎಂದಿದ್ದಾರೆ.

ಕಾಂಗ್ರೆಸ್‌ನ ಈ ಗೂಂಡಾಗಿರಿ ವರ್ತನೆ ಸಹಿಸಲಾಗುವುದಿಲ್ಲ ಮತ್ತು ರಾಜ್ಯದಲ್ಲಿ ತಮ್ಮ ಜಹಾಗೀರ್‌ ಎಂದು ಪಾಳೆಗಾರಿಕೆ ನಡೆಸಲು ರಾಜ್ಯದ ಜನ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share Post