BengaluruCrime

ಪ್ರವೀಣ್‌ ಹತ್ಯೆ ಕೇಸ್‌; ರಾಜೀನಾಮೆಗೆ ಸಿದ್ಧ ಎಂದ ರೇಣುಕಾಚಾರ್ಯ

ಬೆಂಗಳೂರು; ಹಿಂದೂ ಸಂಘಟನೆ ಮುಖಂಡ ಪ್ರವೀಣ್‌ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ನಾನು ರಾಜೀನಾಮೆಗೆ ಸಿದ್ದ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ ಪೋಸ್ಟ್‌ ಹಾಕಿರುವ ಅವರು, ಹಿಂದೂ ಕಾರ್ಯಕರ್ತರನ್ನು ರಕ್ಷಣೆ ಮಾಡುವುದಕ್ಕೆ ನಮಗೆ ಸಾಧ್ಯವಾಗದೇ ಹೋದರೆ ನಾವು ಅಧಿಕಾರದಲ್ಲಿದ್ದು ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ. ಇದನ್ನು ನಾವು ತಡೆಯಲೇಬೇಕಿದೆ ಎಂದು ಹೇಳಿರುವ ಶಾಸಕ ರೇಣುಕಾಚಾರ್ಯ, ಕ್ಷೇತ್ರದ ಜನರ ಜೊತೆ ಚರ್ಚೆ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಎಂದು ಹೇಳಿದ್ದಾರೆ.

Share Post